ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
Cross references
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
ಆತನು ಅವಳಿಗೆ --ಈ ಮಾತಿನ ದೆಸೆಯಿಂದ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು ಅಂದನು.
ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
ಯೇಸು ಇವುಗಳನ್ನು ಕೇಳಿದಾಗ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತಿರುಗಿಕೊಂಡು ತನ್ನನ್ನು ಹಿಂಬಾಲಿಸು ತ್ತಿದ್ದವರಿಗೆ--ಇಂಥ ದೊಡ್ಡ ನಂಬಿಕೆಯನ್ನು ನಾನು ಇಸ್ರಾಯೇಲಿನಲ್ಲಿ ಸಹ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.
ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.