ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
Cross references
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ--ಇದನ್ನು ತಕ್ಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ ಅಂದನು.
ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅದನ್ನು ಮುರಿದು ಅವರಿಗೆ ಕೊಟ್ಟು--ಇದು ನಿಮಗೋಸ್ಕರ ಕೊಡಲ್ಪಟ್ಟ ನನ್ನ ದೇಹ; ನನ್ನ ನೆನಪಿ ಗಾಗಿ ನೀವು ಇದನ್ನು ಮಾಡಿರಿ ಅಂದನು.
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.