ಮತ್ತಾಯ 16:12 · ಕನ್ನಡ ಬೈಬಲ್
ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
Cross references
ಮತ್ತಾಯ 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಮತ್ತಾಯ 15:4
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಮತ್ತಾಯ 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಅಪೋಸ್ತಲರ ಕೃತ್ಯಗಳು 23:8
ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.