ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Cross references
ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
ಅಲೆಕ್ಸಾಂದ್ರ ಮತ್ತು ರೂಫ ಎಂಬವರ ತಂದೆಯಾದ ಕುರೇನ್ಯದ ಸೀಮೋನ ಎಂಬವನು ಗ್ರಾಮದಿಂದ ಬಂದು ಹಾದುಹೋಗುತ್ತಿರುವಾಗ ಆತನ ಶಿಲುಬೆಯನ್ನು ಹೊರುವಂತೆ ಅವರು ಅವನನ್ನು ಬಲವಂತ ಮಾಡಿದರು.
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
ಹೌದು, ಕ್ರಿಸ್ತ ಯೇಸುವಿನಲ್ಲಿ ಭಕ್ತಿ ಯುಳ್ಳವರಾಗಿ ಜೀವಿಸುವದಕ್ಕೆ ಮನಸ್ಸು ಮಾಡುವವ ರೆಲ್ಲರೂ ಹಿಂಸೆಗೊಳಗಾಗುವರು.
ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ.
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.