ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
Cross references
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು.
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ