ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
Cross references
ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
ಯಾಕಂದರೆ ಆತನು ಅವ ನಿಗೆ--ಅಶುದ್ಧಾತ್ಮವೇ, ಆ ಮನುಷ್ಯನೊಳಗಿನಿಂದ ಹೊರಗೆ ಬಾ ಎಂದು ಹೇಳಿದ್ದನು.
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
(ಯಾಕಂದರೆ ಆ ಅಶುದ್ಧಾತ್ಮವು ಅವನಿಂದ ಹೊರಗೆ ಬರಬೇಕೆಂದು ಆತನು ಅಪ್ಪಣೆ ಕೊಟ್ಟಿದ್ದನು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿ ದ್ದದರಿಂದ ಅವನು ಸರಪಣಿಗಳಿಂದಲೂ ಬೇಡಿಗಳಿಂ ದಲೂ ಕಟ್ಟಲ್ಪಡುತ್ತಿದ್ದರೂ ಅವನು ಆ ಬಂಧನಗಳನ್ನು ಮುರಿದುಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಅ
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.