Home Bibles ಮತ್ತಾಯ 17:22 · ಕನ್ನಡ ಬೈಬಲ್
ಮತ್ತಾಯ 17:22 · ಕನ್ನಡ ಬೈಬಲ್

ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.

Cross references

ಮತ್ತಾಯ 16:21

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಮತ್ತಾಯ 16:28

ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.

ಮತ್ತಾಯ 17:23

ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.

ಮತ್ತಾಯ 20:17

ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--

ಮತ್ತಾಯ 24:10

ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

ಮತ್ತಾಯ 26:16

ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.

ಮತ್ತಾಯ 26:46

ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಮಾರ್ಕ 9:30

ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.

ಮಾರ್ಕ 10:33

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಲೂಕ 9:22

ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.

ಲೂಕ 9:44

ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

ಲೂಕ 18:31

ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

ಲೂಕ 24:6

ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--

ಲೂಕ 24:26

ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ

ಲೂಕ 24:46

ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ

ಅಪೋಸ್ತಲರ ಕೃತ್ಯಗಳು 7:52

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

1 ಕೊರಿಂಥದವರಿಗೆ 11:23

ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು

Interlinear

Choose Theme