ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
Cross references
ಆಗ ಕರ್ತನ ವಾಕ್ಯವು ತಿಷ್ಬೀಯನಾದ ಎಲೀಯ ನಿಗೆ ಉಂಟಾಯಿತು--
ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.