ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
Cross references
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
ನಾನೇ ಕರ್ತನೆಂದು ನೀವು ತಿಳಿದುಕೊಳ್ಳು ವಿರಿ; ನೀವು ನನ್ನ ನಿಯಮಗಳಲ್ಲಿ ನಡೆಯಲಿಲ್ಲ; ನನ್ನ ನ್ಯಾಯಗಳನ್ನು ಪಾಲಿಸಲಿಲ್ಲ; ಆದರೂ ನಿಮ್ಮ ಸುತ್ತಲಿರುವ ಅನ್ಯ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದೀರಿ.
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ.
ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.