Home Bibles ಮತ್ತಾಯ 18:9 · ಕನ್ನಡ ಬೈಬಲ್
ಮತ್ತಾಯ 18:9 · ಕನ್ನಡ ಬೈಬಲ್

ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

Cross references

ಮತ್ತಾಯ 5:22

ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯ 5:29

ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

ಮತ್ತಾಯ 16:26

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

ಮತ್ತಾಯ 18:8

ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಮತ್ತಾಯ 19:17

ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.

ಮತ್ತಾಯ 19:23

ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮಾರ್ಕ 9:47

ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.

ಲೂಕ 9:24

ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.

ಅಪೋಸ್ತಲರ ಕೃತ್ಯಗಳು 14:22

ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

ಹೆಬ್ರಿಯರಿಗೆ 4:11

ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.

ಪ್ರಕಟನೆ 21:27

ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

Interlinear

Choose Theme