ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
Cross references
ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.