Home Bibles ಮತ್ತಾಯ 2:12 · ಕನ್ನಡ ಬೈಬಲ್
ಮತ್ತಾಯ 2:12 · ಕನ್ನಡ ಬೈಬಲ್

ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.

Cross references

ಆದಿಕಾಂಡ 20:6

ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.

ಆದಿಕಾಂಡ 31:24

ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.

ನಿರ್ಗಮಕಾಂಡ 1:17

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ಯೋಬ 33:15

ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ

ದಾನಿಯೇಲ 2:19

ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.

ಮತ್ತಾಯ 1:20

ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

ಮತ್ತಾಯ 2:13

ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು

ಮತ್ತಾಯ 2:19

ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--

ಮತ್ತಾಯ 2:22

ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.

ಮತ್ತಾಯ 27:19

ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.

ಅಪೋಸ್ತಲರ ಕೃತ್ಯಗಳು 4:19

ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಅಪೋಸ್ತಲರ ಕೃತ್ಯಗಳು 5:29

ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.

1 ಕೊರಿಂಥದವರಿಗೆ 3:19

ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

Interlinear

Choose Theme