ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
Cross references
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
ತನ್ನ ಸಂಗಡ ಮಾತನಾಡಿದ ದೂತನು ಹೊರಟುಹೋದ ಮೇಲೆ ಕೊರ್ನೇಲ್ಯನು ತನ್ನ ಮನೆಯ ಪರಿಚಾರಕರಲ್ಲಿ ಇಬ್ಬರನ್ನೂ ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸೈನಿಕರಲ್ಲಿ ಒಬ್ಬ ದೇವಭಕ್ತ ನನ್ನೂ ಕರೆದು
ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.