ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
Cross references
ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;
ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.
ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.