ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
Cross references
ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.
ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.