Home Bibles ಮತ್ತಾಯ 2:4 · ಕನ್ನಡ ಬೈಬಲ್
ಮತ್ತಾಯ 2:4 · ಕನ್ನಡ ಬೈಬಲ್

ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.

Cross references

1 ದಿನವೃತ್ತಾಂತ 24:4

ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.

2 ದಿನವೃತ್ತಾಂತ 34:13

ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.

2 ದಿನವೃತ್ತಾಂತ 34:15

ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.

2 ದಿನವೃತ್ತಾಂತ 36:14

ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಎಜ್ರಾ 7:6

ಈ ಎಜ್ರನು ಇಸ್ರಾ ಯೇಲ್‌ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.

ಎಜ್ರಾ 7:11

ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--

ಎಜ್ರಾ 10:5

ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.

ನೆಹೆಮ್ಯ 12:7

ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.

ಕೀರ್ತನೆಗಳು 2:2

ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಯೆರೆಮಿಯ 8:8

ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.

ಮಲಾಕಿ 2:7

ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.

ಮತ್ತಾಯ 7:29

ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.

ಮತ್ತಾಯ 13:52

ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.

ಮತ್ತಾಯ 21:15

ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--

ಮತ್ತಾಯ 21:23

ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.

ಮತ್ತಾಯ 26:3

ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು

ಮತ್ತಾಯ 26:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.

ಮತ್ತಾಯ 27:1

ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಮಾರ್ಕ 8:31

ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

ಲೂಕ 20:19

ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

ಲೂಕ 23:10

ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.

ಯೋಹಾನ 3:10

ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?

ಯೋಹಾನ 7:32

ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.

ಯೋಹಾನ 8:3

ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ

ಯೋಹಾನ 18:3

ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.

ಅಪೋಸ್ತಲರ ಕೃತ್ಯಗಳು 4:5

ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ

ಅಪೋಸ್ತಲರ ಕೃತ್ಯಗಳು 6:12

ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ

ಅಪೋಸ್ತಲರ ಕೃತ್ಯಗಳು 23:9

ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.

Interlinear

Choose Theme