ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
Cross references
ಈತಾಮಾರನ ಕುಮಾರರಿಗಿಂತ ಎಲ್ಲಾಜಾರನ ಕುಮಾ ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದದರಿಂದ ಅವರು ಹೀಗೆಯೇ ವಿಭಾಗಿಸಲ್ಪಟ್ಟಿದ್ದರು. ಎಲ್ಲಾಜಾರನ ಕುಮಾರ ರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಕುಮಾರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟುಮಂದಿ ಮುಖ್ಯ ಸ್ಥರು.
ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.
ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಕರ್ತನ ಆಜ್ಞೆಗಳ ವಾಕ್ಯಗಳನ್ನೂ ಆತನು ಇಸ್ರಾ ಯೇಲಿಗೆ ಕೊಟ್ಟ ಕಟ್ಟಳೆಗಳನ್ನೂ ಬೋಧಿಸತಕ್ಕ ಶಾಸ್ತ್ರಿಯೂ ಯಾಜಕನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ಪ್ರತಿ ಏನಂದರೆ--
ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು.
ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ
ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.