Home Bibles ಮತ್ತಾಯ 20:14 · ಕನ್ನಡ ಬೈಬಲ್
ಮತ್ತಾಯ 20:14 · ಕನ್ನಡ ಬೈಬಲ್

ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.

Cross references

2 ಅರಸುಗಳು 10:16

ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.

2 ಅರಸುಗಳು 10:30

ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.

ಯೆಹೆಜ್ಕೇಲ 29:18

ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.

ಮತ್ತಾಯ 6:2

ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.

ಮತ್ತಾಯ 6:6

ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.

ಮತ್ತಾಯ 6:16

ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ

ಲೂಕ 15:31

ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.

ಲೂಕ 16:25

ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.

ಯೋಹಾನ 17:2

ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.

ರೋಮಾಪುರದವರಿಗೆ 3:4

ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

Interlinear

Choose Theme