ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
Cross references
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಆಗ ಅವನು--ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವ ದೆಲ್ಲವೂ ನಿನ್ನದೇ.ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.