Home Bibles ಮತ್ತಾಯ 20:16 · ಕನ್ನಡ ಬೈಬಲ್
ಮತ್ತಾಯ 20:16 · ಕನ್ನಡ ಬೈಬಲ್

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

Cross references

ಮತ್ತಾಯ 7:13

ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 19:30

ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.

ಮತ್ತಾಯ 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 22:14

ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.

ಮಾರ್ಕ 10:31

ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.

ಲೂಕ 7:47

ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.

ಲೂಕ 13:28

ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.

ಲೂಕ 14:24

ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 15:7

ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 17:17

ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?

ಯೋಹಾನ 12:19

ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 8:30

ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.

ರೋಮಾಪುರದವರಿಗೆ 9:30

ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

1 ತೆಸಲೋನಿಕದವರಿಗೆ 2:13

ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

2 ತೆಸಲೋನಿಕದವರಿಗೆ 2:13

ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ

ಯಾಕೋಬ 1:23

ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.

Interlinear

Choose Theme