ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
Cross references
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
ಆದರೆ ಮೊದಲಿನವರಾದ ಅನೇಕರು ಕಡೆಯವ ರಾಗುವರು ಮತ್ತು ಕಡೆಯವರಾದವರು ಮೊದಲಿನ ವರಾಗುವರು ಅಂದನು.
ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ?
ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು.