ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
Cross references
ಭೂಮಿಯೂ ಅದರ ನಿವಾಸಿಗಳೆಲ್ಲರೂ ಕರಗಿದ್ದಾರೆ; ನಾನು ಅದರ ಸ್ಥಂಭಗಳನ್ನು ನಿಲ್ಲಿಸುತ್ತೇನೆ ಸೆಲಾ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು.
ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.