Home Bibles ಮತ್ತಾಯ 20:34 · ಕನ್ನಡ ಬೈಬಲ್
ಮತ್ತಾಯ 20:34 · ಕನ್ನಡ ಬೈಬಲ್

ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.

Cross references

ಕೀರ್ತನೆಗಳು 119:67

ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.

ಕೀರ್ತನೆಗಳು 119:71

ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.

ಕೀರ್ತನೆಗಳು 145:8

ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.

ಮತ್ತಾಯ 8:15

ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.

ಮತ್ತಾಯ 9:29

ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.

ಮತ್ತಾಯ 9:36

ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.

ಮತ್ತಾಯ 14:14

ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

ಮತ್ತಾಯ 15:32

ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು

ಮಾರ್ಕ 7:33

ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;

ಲೂಕ 7:13

ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.

ಲೂಕ 18:43

ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.

ಲೂಕ 22:51

ಆದರೆ ಯೇಸು--ಇಷ್ಟಕ್ಕೆ ಬಿಡಿರಿ ಅಂದನು. ಆತನು ಅವನ ಕಿವಿಯನ್ನು ಮುಟ್ಟಿ ಅವನನ್ನು ಸ್ವಸ್ಥಪಡಿಸಿದನು.

ಯೋಹಾನ 9:6

ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು;

ಯೋಹಾನ 11:33

ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ಹೆಬ್ರಿಯರಿಗೆ 2:17

ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

1 ಪೇತ್ರ 3:8

ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.

Interlinear

Choose Theme