ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
Cross references
ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.