Home Bibles ಮತ್ತಾಯ 21:19 · ಕನ್ನಡ ಬೈಬಲ್
ಮತ್ತಾಯ 21:19 · ಕನ್ನಡ ಬೈಬಲ್

ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.

Cross references

ಯೆಶಾಯ 5:4

ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ಮಾರ್ಕ 11:14

ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.

ಲೂಕ 3:9

ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.

ಲೂಕ 13:6

ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.

ಲೂಕ 19:42

ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

ಯೋಹಾನ 15:2

ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.

ಯೋಹಾನ 15:6

ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

2 ತಿಮೋಥೆಯ 3:5

ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.

ತೀತ 1:16

ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.

ಹೆಬ್ರಿಯರಿಗೆ 6:7

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

2 ಪೇತ್ರ 2:20

ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.

ಯೂದ 1:12

ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

ಪ್ರಕಟನೆ 22:11

ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;

Interlinear

Choose Theme