ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
Cross references
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇಫಲ ಫಲಿ ಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುವದು ಎಂದು ಹೇಳಿದನು.
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ; ಮೈಲಿಗೆಯಾದವನು ಇನ್ನೂ ತನ್ನನ್ನು ಮೈಲಿಗೆ ಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿವಂತ ನಾಗಲಿ; ಪವಿತ್ರನು ತಾನು ಇನ್ನೂ ಪವಿತ್ರನಾಗಿರಲಿ;