ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
Cross references
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.
ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.
ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.
ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.