Home Bibles ಮತ್ತಾಯ 21:26 · ಕನ್ನಡ ಬೈಬಲ್
ಮತ್ತಾಯ 21:26 · ಕನ್ನಡ ಬೈಬಲ್

ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

Cross references

ಯೆಶಾಯ 57:11

ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?

ಮತ್ತಾಯ 11:9

ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯ 14:5

ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.

ಮತ್ತಾಯ 21:46

ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.

ಮಾರ್ಕ 6:20

ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.

ಮಾರ್ಕ 11:32

ಆದರೆ ನಾವು--ಮನುಷ್ಯರಿಂದ ಎಂದು ಹೇಳುವದಾದರೆ ನಮಗೆ ಜನರ ಭಯವಿದೆ; ಯಾಕಂದರೆ ಯೋಹಾನನು ನಿಜವಾಗಿಯೂ ಪ್ರವಾದಿಯೆಂದು ಎಲ್ಲರೂ ಎಣಿಸಿಕೊಂಡಿರುವರು ಎಂದು ಅವರು ತಮ್ಮಲ್ಲಿ ತರ್ಕಿಸಿಕೊಂಡರು.ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳಲಾರೆವು ಎಂದು ಉತ್ತರ ಕೊಟ್ಟರು. ಅದಕ್ಕೆ ಯೇಸು--ನಾನು ಯಾವ ಅಧಿಕಾರ ದಿಂದ ಇವುಗಳನ್ನು ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಎಂದು ಅವರಿಗೆ ಉತ್ತರ ಕೊಟ್ಟನು.

ಮಾರ್ಕ 12:12

ಆಗ ಆತನು ತಮಗೆ ವಿರೋಧವಾಗಿ ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದು ಆತನನ್ನು ಹಿಡಿಯುವದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿದರು. ಅವರು ಆತನನ್ನು ಬಿಟ್ಟು ಹೊರಟು ಹೋದರು.

ಲೂಕ 20:6

ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು

ಲೂಕ 20:19

ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು.

ಲೂಕ 22:2

ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.

ಯೋಹಾನ 5:35

ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;

ಯೋಹಾನ 9:22

ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

ಯೋಹಾನ 10:41

ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.

ಅಪೋಸ್ತಲರ ಕೃತ್ಯಗಳು 5:26

ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.

Interlinear

Choose Theme