Home Bibles ಮತ್ತಾಯ 21:31 · ಕನ್ನಡ ಬೈಬಲ್
ಮತ್ತಾಯ 21:31 · ಕನ್ನಡ ಬೈಬಲ್

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

Cross references

2 ಸಮುವೇಲ 12:5

ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.

ಯೋಬ 15:6

ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.

ಯೆಹೆಜ್ಕೇಲ 33:11

ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಮತ್ತಾಯ 5:18

ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 6:5

ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.

ಮತ್ತಾಯ 7:21

ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.

ಮತ್ತಾಯ 9:9

ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಮತ್ತಾಯ 12:50

ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.

ಮತ್ತಾಯ 18:3

ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 20:16

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

ಲೂಕ 7:29

ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.

ಲೂಕ 7:37

ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು

ಲೂಕ 15:1

ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.

ಲೂಕ 15:10

ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.

ಲೂಕ 19:9

ಆಗ ಯೇಸು ಅವನಿಗೆ--ಈ ದಿನ ಈ ಮನೆಗೆ ರಕ್ಷಣೆ ಆಯಿತು. ಯಾಕಂದರೆ ಇವನು ಸಹ ಅಬ್ರಹಾಮನ ಮಗ ನಲ್ಲವೇ.

ಲೂಕ 19:22

ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ಅಪೋಸ್ತಲರ ಕೃತ್ಯಗಳು 17:30

ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 9:30

ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

2 ಪೇತ್ರ 3:9

ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

Interlinear

Choose Theme