ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
Cross references
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
ನೀವು ಯೋಹಾನನ ಬಳಿಗೆ ಕಳುಹಿಸಿದಿರಿ; ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರಿವಾಗ ಜನರಿಗೆ--ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ; ಆದರೆ ಇಗೋ, ನನ್ನ ಹಿಂದೆ ಒಬ್ಬಾತನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.