Home Bibles ಮತ್ತಾಯ 21:33 · ಕನ್ನಡ ಬೈಬಲ್
ಮತ್ತಾಯ 21:33 · ಕನ್ನಡ ಬೈಬಲ್

ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

Cross references

ದ್ವಿತೀಯೋಪದೇಶಕಾಂಡ 1:15

ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ

ದ್ವಿತೀಯೋಪದೇಶಕಾಂಡ 16:18

ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ದ್ವಿತೀಯೋಪದೇಶಕಾಂಡ 17:9

ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.

ದ್ವಿತೀಯೋಪದೇಶಕಾಂಡ 33:8

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

1 ಅರಸುಗಳು 22:19

ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.

ಕೀರ್ತನೆಗಳು 80:8

ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

ಪರಮಗೀತ 8:11

ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

ಯೆಶಾಯ 1:10

ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ಯೆಶಾಯ 5:1

ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

ಯೆರೆಮಿಯ 2:21

ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

ಯೆರೆಮಿಯ 19:3

ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್‌ ಮಿಸ್ಸಾ ಬೀಬ್‌ನೆಂದು ಕರೆಯುತ್ತಾನೆಂದು ಹೇಳಿದನು.

ಹೊಶೇಯ 4:1

ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಮಲಾಕಿ 2:4

ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.

ಮತ್ತಾಯ 13:18

ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:

ಮತ್ತಾಯ 21:28

ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

ಮತ್ತಾಯ 23:2

ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;

ಮತ್ತಾಯ 25:14

ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.

ಮಾರ್ಕ 12:1

ಇದಾದ ಮೇಲೆ ಆತನು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದನು. ಒಬ್ಬಾ ನೊಬ್ಬ ಮನುಷ್ಯನು ಒಂದು ದ್ರಾಕ್ಷೇತೋಟವನ್ನು ಮಾಡಿ ಸುತ್ತಲೂ ಬೇಲಿಹಾಕಿ ದ್ರಾಕ್ಷೆಯ ಅಲೆಗಾಗಿ ಅಗೆದು ಗೋಪುರ ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೊರಟುಹೋದನು.

ಮಾರ್ಕ 13:34

ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.

ಲೂಕ 19:12

ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.

ಲೂಕ 20:9

ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.

ಯೋಹಾನ 15:1

ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು.

Interlinear

Choose Theme