ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
Cross references
ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
ನಾನು ನೋಡಿ ಈತನೇ ದೇವರಮಗನೆಂದು ಸಾಕ್ಷಿ ಕೊಟ್ಟಿದ್ದೇನೆ ಅಂದನು.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ.ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು