ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
Cross references
ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು.
ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?
ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ;
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.