ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
Cross references
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.