ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
Cross references
ಆಗ ಅವನು ವಸ್ತ್ರಗಳ ಮನೆಯ ಮೇಲೆ ಇರುವವನಿಗೆ ಬಾಳನನ್ನು ಸೇವಿಸುವ ಎಲ್ಲರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಾ ಎಂದು ಹೇಳಿದ್ದರಿಂದ ಅವನು ಅವರಿಗೋಸ್ಕರ ವಸ್ತ್ರಗಳನ್ನು ತಕ್ಕೊಂಡು ಬಂದನು.
ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
ತಮ್ಮ ವಸ್ತ್ರಗಳನ್ನು ಮಲಿನಮಾಡಿ ಕೊಳ್ಳದಿರುವ ಕೆಲವರು ಸಾರ್ದಿಸಿನಲ್ಲಿ ಸಹ ನಿನ್ನಲ್ಲಿ ದ್ದಾರೆ. ಅವರು ಬಿಳೀ ವಸ್ತ್ರಗಳನ್ನು ಧರಿಸಿಕೊಂಡು ನನ್ನೊಂದಿಗೆ ನಡೆಯುವರು. ಯಾಕಂದರೆ ಅವರು ಯೋಗ್ಯರಾಗಿದ್ದಾರೆ.
ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.