ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
Cross references
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?
ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--
ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.