Home Bibles ಮತ್ತಾಯ 22:16 · ಕನ್ನಡ ಬೈಬಲ್
ಮತ್ತಾಯ 22:16 · ಕನ್ನಡ ಬೈಬಲ್

ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

Cross references

ದ್ವಿತೀಯೋಪದೇಶಕಾಂಡ 33:9

ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

1 ಅರಸುಗಳು 22:14

ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.

ಯೋಬ 32:21

ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?

ಕೀರ್ತನೆಗಳು 5:9

ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.

ಕೀರ್ತನೆಗಳು 12:2

ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.

ಕೀರ್ತನೆಗಳು 55:21

ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.

ಸಾಮೇತಿಗಳು 29:5

ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.

ಯೆಶಾಯ 59:13

ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.

ಯೆರೆಮಿಯ 9:3

ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ

ಯೆಹೆಜ್ಕೇಲ 33:30

ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.

ಮೀಕ 3:9

ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,

ಮಲಾಕಿ 2:6

ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.

ಮಲಾಕಿ 2:9

ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.

ಮತ್ತಾಯ 16:11

ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.

ಮತ್ತಾಯ 22:24

ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

ಮತ್ತಾಯ 22:26

ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.

ಮತ್ತಾಯ 26:18

ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.

ಮತ್ತಾಯ 26:49

ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.

ಮಾರ್ಕ 3:6

ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.

ಮಾರ್ಕ 8:15

ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.

ಮಾರ್ಕ 10:17

ಆತನು ದಾರಿಯಲ್ಲಿ ಮುಂದಕ್ಕೆ ಹೋದಾಗ ಒಬ್ಬನು ಓಡುತ್ತಾ ಬಂದು ಆತನ ಮುಂದೆ ಮೊಣಕಾಲೂರಿ--ಒಳ್ಳೇ ಬೋಧಕನೇ, ನಾನು ನಿತ್ಯಜೀವ ವನ್ನು ಬಾಧ್ಯವಾಗಿ ಹೊಂದುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಿದನು.

ಮಾರ್ಕ 12:14

ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?

ಲೂಕ 7:40

ಆಗ ಯೇಸು ಅವನಿಗೆ--ಸೀಮೋ ನನೇ, ನಾನು ನಿನಗೆ ಹೇಳುವದಕ್ಕೆ ಒಂದು ಮಾತು ಇದೆ ಅನ್ನಲು ಅವನು ಆತನಿಗೆ--ಗುರುವೇ, ಹೇಳು ಅಂದಾಗ, ಆತನು--

ಲೂಕ 20:21

ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.

ಯೋಹಾನ 7:18

ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

ಯೋಹಾನ 14:6

ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಯೋಹಾನ 18:37

ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು

2 ಕೊರಿಂಥದವರಿಗೆ 2:17

ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.

2 ಕೊರಿಂಥದವರಿಗೆ 4:2

ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ

2 ಕೊರಿಂಥದವರಿಗೆ 5:16

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

ಗಲಾತ್ಯದವರಿಗೆ 1:10

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.

ಗಲಾತ್ಯದವರಿಗೆ 2:6

ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.

1 ತೆಸಲೋನಿಕದವರಿಗೆ 2:4

ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

1 ಯೋಹಾನ 5:20

ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್‌.

Interlinear

Choose Theme