ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
Cross references
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.