ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
Cross references
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.