ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
Cross references
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.