Home Bibles ಮತ್ತಾಯ 23:13 · ಕನ್ನಡ ಬೈಬಲ್
ಮತ್ತಾಯ 23:13 · ಕನ್ನಡ ಬೈಬಲ್

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

Cross references

ಯೆಶಾಯ 9:14

ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.

ಯೆಶಾಯ 33:14

ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.

ಜೆಕರ್ಯ 11:17

ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.

ಮತ್ತಾಯ 21:31

ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯ 23:13

ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ಮತ್ತಾಯ 23:23

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

ಮತ್ತಾಯ 23:25

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.

ಮತ್ತಾಯ 23:27

ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

ಮತ್ತಾಯ 23:29

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

ಲೂಕ 11:43

ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.

ಲೂಕ 11:52

ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.

ಯೋಹಾನ 7:46

ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.

ಯೋಹಾನ 9:22

ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.

ಯೋಹಾನ 9:24

ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.

ಯೋಹಾನ 9:34

ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.

ಅಪೋಸ್ತಲರ ಕೃತ್ಯಗಳು 4:17

ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು

ಅಪೋಸ್ತಲರ ಕೃತ್ಯಗಳು 5:28

ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

ಅಪೋಸ್ತಲರ ಕೃತ್ಯಗಳು 5:40

ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

ಅಪೋಸ್ತಲರ ಕೃತ್ಯಗಳು 8:1

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೋಸ್ತಲರ ಕೃತ್ಯಗಳು 13:8

ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

1 ತೆಸಲೋನಿಕದವರಿಗೆ 2:15

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

2 ತಿಮೋಥೆಯ 3:8

ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.

2 ತಿಮೋಥೆಯ 4:15

ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.

Interlinear

Choose Theme