ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
Cross references
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.