ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
Cross references
ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ.
ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.