ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
Cross references
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು.
ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.