ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
Cross references
ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆಗ ಅವನು ನನಗೆ ಹೇಳಿದ್ದೇನಂದರೆ--ದಾನಿಯೇಲನೇ, ನೀನು ಭಯಪಡಬೇಡ, ಯಾಕಂದರೆ ನೀನು ತಿಳಿದುಕೊಳ್ಳು ವದಕ್ಕೂ ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳು ವದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಮಾತುಗಳು ಕೇಳಲ್ಪಟ್ಟವು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ;
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.