ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
Cross references
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಇವೆಲ್ಲವುಗಳು ಸಂಕಟಗಳ ಆರಂಭವು.
ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.