ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
Cross references
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು.
ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.