ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
Cross references
ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ.
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.
ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.
ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.