ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
Cross references
ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.
ಅದಕ್ಕೆ ನಾನು--ಕರ್ತನೇ, ಪ್ರತಿಯೊಂದು ಸಭಾ ಮಂದಿರದಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸಿ ಹೊಡೆದೆನೆಂದು ಅವರಿಗೆ ತಿಳಿದದೆ;
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.