ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
Cross references
ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
ಸಹೋದರರೇ, ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ಒಪ್ಪಿಸಿಕೊಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಹೌದು, ನಾನು ನನ್ನ (ದೇಹವೆಂಬ) ಗುಡಾರದಲ್ಲಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ ಪ್ರೇರಿಸುವದು ಯುಕ್ತವೆಂದೆಣಿಸಿದ್ದೇನೆ.
ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.